ಮಾಜಿ ಡಿಸಿಎಂ ಕಾರು ಪಲ್ಟಿ,ಅದೃಷ್ಟ ವಶಾತ ಪ್ರಾಣಾಪಾಯದಿಂದ ಪಾರು.

ಬೆಳಗಾವಿ: 
ಮಾಜಿ ಉಪ ಮುಖ್ಯಮಂತ್ರಿಗಳ  ಕಾರು ಪಲ್ಟಿಯಾದ ಘಟನೆ
ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡ ಹಿಡಕಲ್ ರಸ್ತೆಯ ಬಿಪಿಎಡ್ ಕಾಲೇಜು ರಸ್ತೆ ತಿರುವಿನ ಬಳಿ ನಡೆದಿದೆ.
ಘಟಪ್ರಭಾ ಎಡದಂಡೆ ಕಾಲುವೆ ಮೇಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕಾರು ಪಲ್ಟಿಯಾಗಿದೆ.
ಕಾರು ಪಲ್ಟಿಯಾಗುತ್ತಿದ್ದಂತೆ ಸುತ್ತಮುತ್ತಲಿನ ಸಾರ್ವಜನಿಕರು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಕಾರಿನಿಂದ ಹೊರ ತೆಗೆದಿದ್ದಾರೆ.
ಅದೃಷ್ಟ ವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

Post a Comment

0 Comments