ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಲಕ್ಷ್ಮಣರಾವ್ ಚಿಂಗಳೆಯವರನ್ನು ಮಾಡಿ, ಬಾಳು ತೇರದಾಳ ಒತ್ತಾಯ.

ಮುಗಳಖೋಡ:- ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆಯವರು ಕಾಂಗ್ರೆಸ್ ಪಕ್ಷಕ್ಕೆ ದಶಕಗಳಿಂದಲೂ ಸೇವೆ ಸಲ್ಲಿಸಿದ್ದಾರೆ. ಮತ್ತು ಸಮಾಜದ ಎಳ್ಗೆಗಾಗಿ, ದ್ಯೇಯೋದ್ದೆಶಗಾಗಿ ದುಡಿದಿದ್ದಾರೆ.ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಒಳ್ಳೆಯ ಒಡನಾಟ ಹೊಂದಿದ್ದಾರೆ ಇವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಸಂಗೋಳ್ಳಿರಾಯಣ್ಣಾ ಹೋರಾಟ ರಚನಾ ಸಮೀತಿ ಜಿಲ್ಲಾ ಉಪಾಧ್ಯಕ್ಷ ಬಾಳು ತೇರದಾಳ ಸರಕಾರಕ್ಕೆ ಒತ್ತಾಯಿಸಿದ್ದಾರೆ. 
ಬೆಳಗಾವಿ ಜಿಲ್ಲೆಯಲ್ಲಿ 12 ಲಕ್ಷಕ್ಕಿಂತ ಹೆಚ್ಚು ಕ ಜನಸಂಖ್ಯೆ ಹೊಂದಿದ  ಕುರುಬ ಸಮುದಾಯದ ಮುಖಂಡರಾದ ಲಕ್ಷ್ಮಣರಾವ ಚಿಂಗಳೆಯವರು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಮಾಜದ ಎಳ್ಗೆಗಾಗಿ ಶ್ರಮಿಸಿದ್ದಾರೆ.
ಇವರ ಸೇವೆ ಗುರುತಿಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೇರಿ ಕುರುಬ ಸಮುದಾಯದ ಚಿಕ್ಕೊಡಿ ಮುಖಂಡರಾದ ಲಕ್ಷ್ಮಣರಾವ್ ಚಿಂಗಳೆಯವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕೆಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ರಚನೆ ಹೋರಾಟ ಸಮಿತಿ ಬೆಳಗಾವಿ ಜಿಲ್ಲೆಯ ಉಪಾಧ್ಯಕ್ಷರಾದ ಬಾಳು ತೇರದಾಳ ರಾಯಬಾಗ ತಾಲೂಕಿನ ಇಟನಾಳ ಗ್ರಾಮದ ತಮ್ಮ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.

Post a Comment

0 Comments